ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ.
ಇಂದೂ ಕೂಡ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್ನ ಚಿನ್ನ ಗ್ರಾಂಗೆ 595 ರೂ.ನಷ್ಟು ಕುಸಿತವಾಗಿದ್ದರೆ, ಬೆಳ್ಳಿ 1 ಕೆಜಿಗೆ 15 ಸಾವಿರ ರೂ.ಗಳಷ್ಟು ಕುಸಿತವಾಗಿದೆ.
ಲಭ್ಯವಿರುವ ಮಾರುಕಟ್ಟೆ ಮಾಹಿತಿ ಪ್ರಕಾರ, 24 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ 595 ರೂ.ನಷ್ಟು ಇಳಿಕೆಯಾಗಿದ್ದು, 14,002 ರೂ.ಗೆ ತಲುಪಿದೆ. 22 ಕ್ಯಾರೆಟ್ನ ಚಿನ್ನ ಪ್ರತಿ ಗ್ರಾಂಗೆ 545 ರೂ.ನಷ್ಟು ಇಳಿಕೆಯಾಗಿದ್ದು, 12,835 ರೂ.ನಷ್ಟಿದೆ.
ಆಭರಣ ಚಿನ್ನವಾದ 18 ಕ್ಯಾರೆಟ್ನ ಚಿನ್ನ 446 ರೂ.ಗಳಷ್ಟು ಕಡಿಮೆಯಾಗಿದ್ದು, ಗ್ರಾಂಗೆ 10502 ರೂ.ಗೆ ತಲುಪಿದೆ. ಮಾ.14ರಿಂದ ಇಳಿಕೆಯಾಗುತ್ತಿರುವ ಚಿನ್ನದ ದರವು ಮಾ.17 ರಂದು 24 ಕ್ಯಾರೆಟ್ನ ಗ್ರಾಂ ಚಿನ್ನ 66 ರೂ. ಹಾಗೂ 22 ಕ್ಯಾರೆಟ್ನ ಚಿನ್ನ ಗ್ರಾಂಗೆ 60 ರೂ. ಏರಿಕೆಯಾಗಿರುವುದನ್ನು ಹೊರತುಪಡಿಸಿದರೆ ನಿರಂತರ ಇಳಿಕೆಯಾಗಿದೆ.
ಅಂದು 24 ಕ್ಯಾರೆಟ್ನ ಚಿನ್ನ 15,966 ರೂ.ನಷ್ಟಿತ್ತು. ಇಂದು 14,002 ರೂ.ಗೆ ಇಳಿದಿದ್ದು, 964 ರೂ.ನಷ್ಟು ಇಳಿಕೆಯಾಗಿದೆ. ಅದೇ ರೀತಿ 22 ಕ್ಯಾರೆಟ್ನ ಚಿನ್ನ ಮಾ.14 ರಂದು 14,635 ರೂ.ನಷ್ಟಿತ್ತು. ಇಂದು 12,835 ರೂ.ನಷ್ಟಿದೆ. ಸುಮಾರು 1,800 ರೂ.ಗಳಷ್ಟು ಪ್ರತಿ ಗ್ರಾಂಗೆ ಇಳಿಕೆಯಾಗಿರುವುದು ಕಂಡುಬಂದಿದೆ.
ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದ ಬೆಳ್ಳಿಯು ಇಂದು ಪ್ರತಿ ಕೆಜಿಗೆ 15,000 ರೂ.ನಷ್ಟು ಇಳಿಕೆಯಾಗಿದ್ದು, 2,30,000 ರೂ.ಗೆ ತಲುಪಿದೆ. ಚಿನ್ನದಂತೆ ಬೆಳ್ಳಿಯೂ ಸತತವಾಗಿ ಇಳಿಕೆಯಾಗುತ್ತಿದ್ದು, ಮಾ.14ರ ನಂತರ ಇಂದಿನವರೆಗೆ ಇಳಿಕೆಯಾಗಿರುವುದು ಕಂಡುಬಂದಿದೆ. ಆದರೆ ಮಾ.17 ರಂದು 5 ಸಾವಿರದಷ್ಟು ಏರಿಕೆಯಾಗಿತ್ತು. ಮಾ.14 ರಂದು 2,75,000 ರೂ.ಗಳಿದ್ದ ಬೆಳ್ಳಿದರವು ಇಂದು 2,30,000 ರೂ.ಗೆ ಕುಸಿದಿದ್ದು, 9 ದಿನದಲ್ಲಿ 40 ಸಾವಿರ ರೂ.ನಷ್ಟು ಕುಸಿತವಾಗಿದೆ.
ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು, ಅದರ ಪರಿಣಾಮ ಷೇರುಪೇಟೆ ಮೇಲೆ ಉಂಟಾಗುತ್ತಿದೆ. ಜೊತೆಗೆ ಚಿನಿವಾರಪೇಟೆಯಲ್ಲೂ ಕುಸಿತ ಉಂಟಾಗಿದ್ದು, ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿದರಗಳು ಏರಿಕೆಯಾಗುವ ಸಾಧ್ಯತೆ ವಿರಳ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…