ರಾಜ್ಯ

ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆಗ್ತಿದ್ಯಾ? ನಾನ್‌ವೆಜ್‌ ಪ್ರಿಯರು ಈ ಸುದ್ದಿ ಓದಲೇಬೇಕು…..

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್‌ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗೆ ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಶುಕ್ರವಾರ(ಜು.26) ನಗರಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ಮಾಡಿ ಮಾಂಸದ ಬಾಕ್ಸ್‌ಗಳನ್ನು ತಡೆಹಿಡಿದಿದ್ದಾರೆ.

ಪುನೀತ್‌ ಕೆರೆಹಳ್ಳಿ ತಂಡದ ಕಾರ್ಯರ್ತರು ಈ ಕಾರ್ಯಚರಣೆ ನಡೆಸಿದ್ದಾರೆ. ಮಟನ್‌ ಮಾಂಸವನ್ನು ಎತ್ತಿ ನೋಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಮಾಂಸಗಳನ್ನು ಪರಿಶೀಲನೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ವ್ಯಾಪಾರಿ ಅಬ್ದುಲ್‌ ರಜಾಕ್‌ ಮತ್ತು ಪುನೀತ್‌ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.

ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್‌ ರಜಾಕ್‌ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್‌, ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಅವರ ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್‌ಗಳು ಪಾರ್ಸಲ್‌ ಬಂದಿವೆ. ಅದರಲ್ಲಿ ಒಟ್ಟು 4.500 ಕೆ.ಜಿ ಮಾಂಸವಿದೆ ಎಂದು ತಿಳಿದುಬಂದಿದೆ.

ಸದ್ಯ ಘಟನಾ ಸ್ಥಳಕ್ಕೆ ಬಿಬಿಎಂಪಿ ಆಹಾರ ಗುಣಮಟ್ಟ ಅಧಿಕಾರಿಗಳು ದೌಡಾಯಿಸಿದ್ದು, ಮಾಂಸದ ವಿವಿಧ ಅಂಗಾಂಗಳನ್ನು ಸ್ಯಾಂಪಲ್‌ಗಳಿಗೆ ಕಳುಹಿಸಿದ್ದಾರೆ. ಇನ್ನೂ ಎರಡು ಕಡೆಯ ತಲ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

3 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

3 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

3 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

3 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

4 hours ago