ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿಗೆ ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಶುಕ್ರವಾರ(ಜು.26) ನಗರಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ಮಾಡಿ ಮಾಂಸದ ಬಾಕ್ಸ್ಗಳನ್ನು ತಡೆಹಿಡಿದಿದ್ದಾರೆ.
ಪುನೀತ್ ಕೆರೆಹಳ್ಳಿ ತಂಡದ ಕಾರ್ಯರ್ತರು ಈ ಕಾರ್ಯಚರಣೆ ನಡೆಸಿದ್ದಾರೆ. ಮಟನ್ ಮಾಂಸವನ್ನು ಎತ್ತಿ ನೋಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಮಾಂಸಗಳನ್ನು ಪರಿಶೀಲನೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ವ್ಯಾಪಾರಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.
ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್, ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಅವರ ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್ಗಳು ಪಾರ್ಸಲ್ ಬಂದಿವೆ. ಅದರಲ್ಲಿ ಒಟ್ಟು 4.500 ಕೆ.ಜಿ ಮಾಂಸವಿದೆ ಎಂದು ತಿಳಿದುಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಬಿಬಿಎಂಪಿ ಆಹಾರ ಗುಣಮಟ್ಟ ಅಧಿಕಾರಿಗಳು ದೌಡಾಯಿಸಿದ್ದು, ಮಾಂಸದ ವಿವಿಧ ಅಂಗಾಂಗಳನ್ನು ಸ್ಯಾಂಪಲ್ಗಳಿಗೆ ಕಳುಹಿಸಿದ್ದಾರೆ. ಇನ್ನೂ ಎರಡು ಕಡೆಯ ತಲ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…