ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿಗೆ ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಶುಕ್ರವಾರ(ಜು.26) ನಗರಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ಮಾಡಿ ಮಾಂಸದ ಬಾಕ್ಸ್ಗಳನ್ನು ತಡೆಹಿಡಿದಿದ್ದಾರೆ.
ಪುನೀತ್ ಕೆರೆಹಳ್ಳಿ ತಂಡದ ಕಾರ್ಯರ್ತರು ಈ ಕಾರ್ಯಚರಣೆ ನಡೆಸಿದ್ದಾರೆ. ಮಟನ್ ಮಾಂಸವನ್ನು ಎತ್ತಿ ನೋಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಮಾಂಸಗಳನ್ನು ಪರಿಶೀಲನೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ವ್ಯಾಪಾರಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.
ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್, ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಅವರ ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್ಗಳು ಪಾರ್ಸಲ್ ಬಂದಿವೆ. ಅದರಲ್ಲಿ ಒಟ್ಟು 4.500 ಕೆ.ಜಿ ಮಾಂಸವಿದೆ ಎಂದು ತಿಳಿದುಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಬಿಬಿಎಂಪಿ ಆಹಾರ ಗುಣಮಟ್ಟ ಅಧಿಕಾರಿಗಳು ದೌಡಾಯಿಸಿದ್ದು, ಮಾಂಸದ ವಿವಿಧ ಅಂಗಾಂಗಳನ್ನು ಸ್ಯಾಂಪಲ್ಗಳಿಗೆ ಕಳುಹಿಸಿದ್ದಾರೆ. ಇನ್ನೂ ಎರಡು ಕಡೆಯ ತಲ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…