ದಾವಣಗೆರೆ: ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಯಾವುದೇ ನೇಮಕಾತಿಯೂ ನಡೆಯುತ್ತಿಲ್ಲ. ಇದು ಹೀಗೆ ಮುಂದುವರಿದರೆ ರಾಜ್ಯಕ್ಕೆ ನೇಪಾಳದಲ್ಲಾದ ಸ್ಥಿತಿ ಆಗುತ್ತದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಗುತ್ತಿದೆ. ಇಂದು ಧಾರವಾಡದಲ್ಲಿ ಪೊಲೀಸ್ ನೇಮಕಾತಿಗಾಗಿ 16 ಸಾವಿರಕ್ಕೂ ಹೆಚ್ಚು ಯುವಕರು ಸೇರಿದ್ದಾರೆ. ನಾನು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದೆ.
ಇದನ್ನು ಓದಿ : ನೇಪಾಳದ ಪರಿಸ್ಥಿತಿ ರಾಜ್ಯಕ್ಕೂ ಬರಲಿದೆ : ಯತ್ನಾಳ್ ಭವಿಷ್ಯ
ಸದನದಲ್ಲಿಯೂ ಕೂಡ ಕೇಳಿಕೊಂಡೆ. ಪೊಲೀಸ್ ನೇಮಕಾತಿಯಲ್ಲಿ ವಯಸ್ಸಿನ ಮಿತಿ ಸ್ವಲ್ಪ ಸಡಿಲಗೊಳಿಸಿ. ಈಗಾಗಲೇ ನೇಮಕಾತಿಗಾಗಿ ಕಾದು ಕಾದು ಹಲವರ ವಯಸ್ಸಿನ ಮಿತಿ ಕಳೆದಿದೆ. ಅವರು ಏನು ಮಾಡಬೇಕು. ಸರ್ಕಾರದ ತಪ್ಪಿಗೆ ಅಭ್ಯರ್ಥಿಗಳಿಗೆ ಶಿಕ್ಷೆಯಾಗುತ್ತಿದೆ. ಯಾವೊಂದು ಇಲಾಖೆಯ ನೇಮಕಾತಿಯನ್ನು ಸರ್ಕಾರ ಮಾಡುತ್ತಿಲ್ಲ. ಉದ್ಯೋಗಕ್ಕಾಗಿ ಅಲೆದು ಅಲೆದು ಯುವಕರು ರೋಸಿಹೋಗುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಉಚಿತ ಅಕ್ಕಿ ಅನ್ನತಿಂದು, ಬಸ್ನಲ್ಲಿ ಓಡಾಡಿಕೊಂಡು ಇರಬೇಕಾ? ಕೆಲಸಕ್ಕಾಗಿ ಹೀಗೆ ಅಡ್ಡಾಡುತ್ತಾ ಇದ್ದರೆ ಸಾಕಾ? ಈ ರೀತಿ ಇದ್ದರೆ ರಾಜ್ಯದಲ್ಲಿ ನೇಪಾಳದಲ್ಲಿ ಆದ ಸ್ಥಿತಿ ಬರುತ್ತದೆ. ಇದೇ ರೀತಿ ಆಗುವ ಮೊದಲು ಸರ್ಕಾರ ಎಚ್ಚರ ವಹಿಸಲು ಎಂದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…