ರಾಜ್ಯ

ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ರಾಯಚೂರು: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದರು.

ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ ಅವರು ಬೃಹತ್ ಸ್ವಾಭಿಮಾನಿ ಜನ ಸಮಾವೇಷ ಸಂಘಟಿಸಿದ ಬೋಸರಾಜು ಮತ್ತು ರವಿ ಬೋಸರಾಜು ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಾವು ಬದ್ದರಾಗಿದ್ದೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago