ರಾಜ್ಯ

ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ರಾಯಚೂರು: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದರು.

ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ ಅವರು ಬೃಹತ್ ಸ್ವಾಭಿಮಾನಿ ಜನ ಸಮಾವೇಷ ಸಂಘಟಿಸಿದ ಬೋಸರಾಜು ಮತ್ತು ರವಿ ಬೋಸರಾಜು ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಾವು ಬದ್ದರಾಗಿದ್ದೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago