ರಾಜ್ಯ

ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಪ್ರಿಯಾಂಕ ಖರ್ಗೆ ಪ್ರಶ್ನೆ

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಪ್ರಿಯಾಂಕ ಖರ್ಗೆ, ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್‌ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ಹೆಸರನ್ನ ಮೊದಲೇ ಬಾರಿಗೆ ಪ್ರಸ್ತಾಪಿಸಿದೆ ಅನ್ವರ್ ಮಣಿಪ್ಪಾಡಿಯವರು ಎಂದಿದ್ದಾರೆ.

ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದ ಮಣಪ್ಪಾಡಿಯವರು ಈಗ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಲು ಎಷ್ಟು ಆಫರ್ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ.

ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವೀಡಿಯೊಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ. ಬಿಜೆಪಿ ಪಕ್ಷ, ಅವರ ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು, ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ! ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಣಿಪ್ಪಾಡಿಯವರಿಗೆ ಈಗ ಏನಾಯಿತು? ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

52 mins ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

5 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

5 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

5 hours ago