ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ ಲಾಭವಾಗುತ್ತಿದ್ದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದೆ.
ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ? ಮಾಲ್ಡಿವ್ಸ್, ಅಪಘಾನಿಸ್ತಾನ್, ಭೂತಾನ್ ಸೇರಿದಂತೆ ವಿದೇಶಗಳಿಗೆ ಸಾವಿರಾರು ಕೋಟಿ ಹಣ ನೀಡಿದರೆ ದೇಶದ ಪ್ರಗತಿಗೆ ಮಾರಕವಲ್ಲವೇ? ಪ್ರಧಾನಿ ಓಡಾಟಕ್ಕೆ 8 ಸಾವಿರ ಕೋಟಿ ಕೊಟ್ಟು ವಿಮಾನ ಖರೀದಿಸಿದರೆ ಪ್ರಗತಿಗೆ ಮಾರಕವಲ್ಲವೇ? ಎಂದು ಕಿಡಿಕಾರಿದೆ.
ಅಂದಾಜು 5000 ಕೋಟಿ ವೆಚ್ಚದ ಉಚಿತ ಪ್ರಯಾಣದ ಯೋಜನೆಯ ಬಗ್ಗೆ ಇಷ್ಟು ಅಸಹನೆ ಹೊಂದಿರುವ ಮೋದಿಯವರ ಜನವಿರೋಧಿ ನಿಲುವು ಜನತೆಗೆ ಅರ್ಥವಾಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…