ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ವೋಟ್‌ ಚೋರಿ ಕಾರಣವೇ?: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಾಗ ಬಾರದ ಅನುಮಾನ ಈಗ ಏಕೆ ಬಂದಿದೆ? ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಬರುವುದಿಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇರುವುದಿಲ್ಲ. ಬಿಜೆಪಿ ಗೆದ್ದಾಗ ಮಾತ್ರ ಮತಗಳ್ಳತನದ ಅನುಮಾನ ಏಕೆ ಬರುತ್ತದೆ? ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನು ಓದಿ: ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ

ಸಿದ್ದರಾಮಯ್ಯನವರೇ ನೀವು ರಾಜಕಾರಣವನ್ನು ರಾಜಕಾರಣವಾಗಿ ಎದುರಿಸಿ. ಓಡಿ ಹೋಗಬೇಡಿ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮತ್ತು ನಿಮ್ಮ ಪಕ್ಷದ್ದು ಹಿಟ್ ಅಂಡ್ ರನ್ ಕೇಸ್. ಬಿಹಾರದಲ್ಲಿ ಎನ್‍ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್‍ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಎನ್ನುತ್ತಾರೆ. ಸೋತರೆ ವೋಟ್ ಚೋರಿ ಎನ್ನುತ್ತಾರೆ. ರಾಹುಲ್ ಗಾಂಧಿ ಮತ್ತು ಟೀಂ. ಬರೀ ಹಿಟ್ ರನ್ ಮಾಡುವುದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರದ ಮೇಲಾಗುವ ಪರಿಣಾಮದ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago