ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಾಗ ಬಾರದ ಅನುಮಾನ ಈಗ ಏಕೆ ಬಂದಿದೆ? ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಬರುವುದಿಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇರುವುದಿಲ್ಲ. ಬಿಜೆಪಿ ಗೆದ್ದಾಗ ಮಾತ್ರ ಮತಗಳ್ಳತನದ ಅನುಮಾನ ಏಕೆ ಬರುತ್ತದೆ? ಎಂದು ತರಾಟೆಗೆ ತೆಗೆದುಕೊಂಡರು.
ಇದನ್ನು ಓದಿ: ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ
ಸಿದ್ದರಾಮಯ್ಯನವರೇ ನೀವು ರಾಜಕಾರಣವನ್ನು ರಾಜಕಾರಣವಾಗಿ ಎದುರಿಸಿ. ಓಡಿ ಹೋಗಬೇಡಿ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮತ್ತು ನಿಮ್ಮ ಪಕ್ಷದ್ದು ಹಿಟ್ ಅಂಡ್ ರನ್ ಕೇಸ್. ಬಿಹಾರದಲ್ಲಿ ಎನ್ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಎನ್ನುತ್ತಾರೆ. ಸೋತರೆ ವೋಟ್ ಚೋರಿ ಎನ್ನುತ್ತಾರೆ. ರಾಹುಲ್ ಗಾಂಧಿ ಮತ್ತು ಟೀಂ. ಬರೀ ಹಿಟ್ ರನ್ ಮಾಡುವುದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.
ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರದ ಮೇಲಾಗುವ ಪರಿಣಾಮದ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದು ಮನವಿ ಮಾಡಿದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…