ರಾಜ್ಯ

ಕಾವೇರಿ ನದಿಗೆ ಕಲುಷಿತ ನೀರಿನ ಸೇರ್ಪಡೆ ಬಗ್ಗೆ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಿಸಲಾಗಿದೆ: ಈಶ್ವರ್‌ ಖಂಡ್ರೆ

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) ವಿಧಾನ ಪರಿಷತ್‌ ಸದಸ್ಯ ಎಂ.ಪಿ.ಕುಶಾಲಪ್ಪ ಅವರ ಪ್ರಶ್ನೆಗೆಡ ಉತ್ತರಿಸಿದ ಅವರು, ಕಳೆದ ಜೂನ್‌ ಮಾಹೆಯಲ್ಲಿ ತಜ್ಞರ ಸಮಿತಿ ರಚಿಸಿ ಕಾವೇರಿ ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತ ತಡೆಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಆದೇಶಿಸಲಾಗಿದೆ. ಅಲ್ಲದೇ ಈ ಕುರಿತು ತಜ್ಞರ ಸಮಿತಿಯೂ ಈಗಾಗಲೇ 2 ಬಾರಿ ಸಭೆ ನಡೆಸಿದ್ದಾರೆ. ಜೊತೆಗೆ ಜುಲೈ 4 ರಂದು ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿಗೆ ಭೇಟಿ ನೀಡಿ ನದಿ ಮಾಲಿನ್ಯದ ಬಗ್ಗೆ ಸದಸ್ಯರಿಂದ ವ್ಯಕ್ತವಾಗಿರುವ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ತಜ್ಞರ ಸಮಿತಿಯೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೂಲಕ ಸರ್ಕಾರಕ್ಕೆ ವರದಿ ನೀಡಿದೆ. ಈ ವರದಿ ಅನ್ವಯ ನದಿಯ ರಕ್ಷಣೆಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಮತ್ತು ತಡೆಯಲು ತಾಂತ್ರಿಕ ಸಮಿತಿಯು ನೀಡಿರುವ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಯೋಜನೆಗಳ ಬಗ್ಗೆ ಮಾಡಲಾಗಿರುವ ಅವಲೋಕನಗಳು, ಶಿಫಾರಸ್ಸುಗಳು ನೀಡಿರುವ ಸಲಹೆ ಮತ್ತು ಮಾರ್ಗೋಪಾಯಗಳ ಬಗ್ಗೆ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಪೌರಾಡಳಿತ ನಿರ್ದೇಶನಾಲಯ, ಕಾವೇರಿ ನೀರಾವರಿ ನಿಗಮ ನಿಯಮಿತ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರು, ಜಲ ಸಂಪನ್ಮೂಲ ಇಲಾಖೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಮಾಲಿನ್ಯ ತಡೆ ಬಗ್ಗೆ ಚರ್ಚಿಸಿ ಸಮಗ್ರ ಕಾರ್ಯನೀತಿಯನ್ನು ರೂಪಿಸಬೇಕಾಗಿದೆ ಎಂದು ಉತ್ತರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

11 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

11 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

11 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

11 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

11 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

11 hours ago