ರಾಜ್ಯ

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು ಹಾಗೂ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಬಿ.ಖಂಡ್ರೆ ಸೂಚಿಸಿದ್ದಾರೆ.

ಬೇಲೂರು ತಾಲ್ಲೂಕು ಕೋಗೋಡಿನ ತೋಟದಲ್ಲಿ ಶುಕ್ರವಾರ(ನಿನ್ನೆ) ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು(ಮಾರ್ಚ್‌.15) ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿ ವೇಲೆ ಸಹ ಕಾಡಾನೆ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು ಎಂದು ಆದೇಶಿಸಿದರು.

ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ ಎರಡು ಹೆಚ್ಚುವರಿ ಜೀಪುಗಳು ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಲ್ಲದೇ ಕಾಡಾನೆ ಸಂಚಾರದ ಬಗ್ಗೆ ಜನತೆಯಿಂದ ಮಾಹಿತಿ ಬಂದ ಕೂಡಲೇ ಸ್ಪಂದಿಸಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

37 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

40 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

42 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

44 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

46 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

48 mins ago