ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು ಹಾಗೂ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಬಿ.ಖಂಡ್ರೆ ಸೂಚಿಸಿದ್ದಾರೆ.
ಬೇಲೂರು ತಾಲ್ಲೂಕು ಕೋಗೋಡಿನ ತೋಟದಲ್ಲಿ ಶುಕ್ರವಾರ(ನಿನ್ನೆ) ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು(ಮಾರ್ಚ್.15) ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿ ವೇಲೆ ಸಹ ಕಾಡಾನೆ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು ಎಂದು ಆದೇಶಿಸಿದರು.
ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ ಎರಡು ಹೆಚ್ಚುವರಿ ಜೀಪುಗಳು ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಲ್ಲದೇ ಕಾಡಾನೆ ಸಂಚಾರದ ಬಗ್ಗೆ ಜನತೆಯಿಂದ ಮಾಹಿತಿ ಬಂದ ಕೂಡಲೇ ಸ್ಪಂದಿಸಬೇಕು ಎಂದು ಹೇಳಿದರು.
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…