ಬೆಂಗಳೂರು: ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. “ಪ್ರಕೃತಿ ವಿಕೋಪ ನಿವಾರಕ – ನಮ್ಮ ಪರಿಸರ ವಿನಾಯಕ’’ನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಕರೆ ನೀಡಿದ್ದಾರೆ.
ಸಂಕಲ್ಪ: ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡುವುದಿಲ್ಲ; ಬದಲಾಗಿ ಸಣ್ಣ ಮಣ್ಣಿನ ಪರಿಸರ ಸ್ನೇಹಿ ಗಣಪನನ್ನೇ ತಂದು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಮರ -ಗಿಡಗಳಿಗೆ ಹಾಕುತ್ತೇನೆ ಎಂದು ಸಂಕಲ್ಪ ಮಾಡೋಣ ಎಂದು ಅವರು ವಿನಂತಿಸಿದ್ದಾರೆ.
ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದೂ ಈಶ್ವರ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಮುಚ್ಚಳಿಕೆ: ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…