ಬೆಂಗಳೂರು: ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. “ಪ್ರಕೃತಿ ವಿಕೋಪ ನಿವಾರಕ – ನಮ್ಮ ಪರಿಸರ ವಿನಾಯಕ’’ನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಕರೆ ನೀಡಿದ್ದಾರೆ.
ಸಂಕಲ್ಪ: ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡುವುದಿಲ್ಲ; ಬದಲಾಗಿ ಸಣ್ಣ ಮಣ್ಣಿನ ಪರಿಸರ ಸ್ನೇಹಿ ಗಣಪನನ್ನೇ ತಂದು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಮರ -ಗಿಡಗಳಿಗೆ ಹಾಕುತ್ತೇನೆ ಎಂದು ಸಂಕಲ್ಪ ಮಾಡೋಣ ಎಂದು ಅವರು ವಿನಂತಿಸಿದ್ದಾರೆ.
ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದೂ ಈಶ್ವರ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಮುಚ್ಚಳಿಕೆ: ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…