ರಾಜ್ಯ

ಐತಿಹಾಸಿಕ ಸಾಧನೆ ಮಾಡಿದ ಇಸ್ರೋ: ಡಾಕಿಂಗ್‌ ಸಾಹಸ ಯಶಸ್ವಿ

ಬೆಂಗಳೂರು: ಸ್ಪೇಸ್‌ ಡಾಕಿಂಗ್‌ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಈ ಮೂಲಕ ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ ಮತ್ತು ಅನ್‌ ಡಾಕಿಂಗ್‌ ಪ್ರಯೋಗ ಯಶಸ್ವಿಯಾಗಿದ್ದು, ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿತ್ತು.

ಈ ಬಗ್ಗೆ ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಇಸ್ರೋ, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್‌ ಮಾಡಿದೆ. ಭಾರತದ ಇಸ್ರೋದಿಂದ ನಡೆಸಲಾದ ಸ್ಪೇಡೆಕ್ಸ್‌ ಮಿಷನ್‌ ಯಶಸ್ಸು ಸಾಧಿಸಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆಪಡುತ್ತೇವೆ ಎಂದು ಹೇಳಿದೆ.

ಭಾರತವು ಯಶಸ್ವಿ ಬಾಹ್ಯಾಕಾಶ ಡಾಕಿಂಗ್‌ ಸಾಧಿಸಿದ 4ನೇ ರಾಷ್ಟ್ರವಾಗಿದೆ ಎಂದು ಬರೆಯಲಾಗಿದೆ.

ಜೋಡಣೆ ಬಳಿಕ ಸಿಗ್ನಲ್‌ ಮೂಲಕ ಉಪಗ್ರಹಗಳ ನಿಯಂತ್ರಣ ಯಶಸ್ವಿಯಾಗಿದೆ. ಅನ್‌ಡಾಕಿಂಗ್‌ ಮತ್ತು ವಿದ್ಯುತ್‌ ಸರಬರಾಜು ಪರೀಕ್ಷೆಗಳನ್ನು ಮುಂಬರುವ ದಿನಗಳಲ್ಲಿ ನಡೆಸಲಾಗುವುದು ಎಂದು ಇಸ್ರೋ ಹೇಳಿದೆ.

ಜನವರಿ.12ರಂದು ಇಸ್ರೋ ಎರಡು ಬಾಹ್ಯಾಕಾಶ ನೌಕೆಗಳನ್ನು ಮೂರು ಮೀಟರ್‌ ಸಮೀಪಕ್ಕೆ ತಂದು ಡಾಕಿಂಗ್‌ಗೂ ಮುನ್ನ ಪ್ರಾಯೋಗಿಕ ಪ್ರಯತ್ನವನ್ನು ನಡೆಸಿತ್ತು. ಬಳಿಕ ಎರಡೂ ಉಪಗ್ರಹಗಳನ್ನು ಹಿಂದಕ್ಕೆ ಸರಿಸಿ ಸುರಕ್ಷಿತವಾಗಿ ನೆಲೆಗೊಳಿಸಿತ್ತು.

ಇನ್ನು 2024ರ ಡಿಸೆಂಬರ್‌.30ರಂದು ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ಆರಂಭಿಸಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago