ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ.
ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಲೇಬೇಕೆಂಬ ನಿಯಮದಲ್ಲಿ ಈ ವರ್ಷವೂ ವಿನಾಯಿತಿ ನೀಡಲಾಗಿದೆ. 60 ದಿನಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದೆ. ಎರಡು ತಿಂಗಳ ರಿಯಾಯಿತಿ ತರುತ್ತೇವೆ. ಅದರಂತೆ 2026-27ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿ ಸಂಬಂಧ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುತ್ತದೆ. ಒಂದನೇ ತರಗತಿ ದಾಖಲಾತಿಗೆ 6 ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳುವಂತೆ ಇತ್ತ ಎಲ್ಕೆಜಿ ಹಾಗೂ ಯುಕೆಜಿ ಮಟ್ಟದಲ್ಲೇ ದಾಖಲಾತಿ ವಯೋಮಿತಿ ನಿಗದಿ ಮಾಡುವ ಸಂಬಂಧ ಕಾಯ್ದೆ ತರಲಾಗುವುದು. ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿಗೆ ಈಗ ವಯೋಮಿತಿ ನಿಗದಿ ಮಾಡುವ ಕಾನೂನು ಇಲ್ಲ.
ಹೀಗಾಗಿ ದಾಖಲಾತಿಗೆ ಸಮಸ್ಯೆಯಾಗುತ್ತಿದೆ. ಅಲ್ಲಿಗೆ ಹೊಸದಾದ ಕಾನೂನು ತಂದು ಖಾಯಂ ಪರಿಹಾರ ತರಲಾಗುವುದು. ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮಕ್ಕೆ ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿ ವಯೋಮಿತಿ ನಿಗದಿ ಸಂಬಂಧ ಕಾಯ್ದೆಯನ್ನು ರೂಪಿಸಿ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…