ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ.
ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಲೇಬೇಕೆಂಬ ನಿಯಮದಲ್ಲಿ ಈ ವರ್ಷವೂ ವಿನಾಯಿತಿ ನೀಡಲಾಗಿದೆ. 60 ದಿನಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದೆ. ಎರಡು ತಿಂಗಳ ರಿಯಾಯಿತಿ ತರುತ್ತೇವೆ. ಅದರಂತೆ 2026-27ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿ ಸಂಬಂಧ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುತ್ತದೆ. ಒಂದನೇ ತರಗತಿ ದಾಖಲಾತಿಗೆ 6 ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳುವಂತೆ ಇತ್ತ ಎಲ್ಕೆಜಿ ಹಾಗೂ ಯುಕೆಜಿ ಮಟ್ಟದಲ್ಲೇ ದಾಖಲಾತಿ ವಯೋಮಿತಿ ನಿಗದಿ ಮಾಡುವ ಸಂಬಂಧ ಕಾಯ್ದೆ ತರಲಾಗುವುದು. ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿಗೆ ಈಗ ವಯೋಮಿತಿ ನಿಗದಿ ಮಾಡುವ ಕಾನೂನು ಇಲ್ಲ.
ಹೀಗಾಗಿ ದಾಖಲಾತಿಗೆ ಸಮಸ್ಯೆಯಾಗುತ್ತಿದೆ. ಅಲ್ಲಿಗೆ ಹೊಸದಾದ ಕಾನೂನು ತಂದು ಖಾಯಂ ಪರಿಹಾರ ತರಲಾಗುವುದು. ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮಕ್ಕೆ ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿ ವಯೋಮಿತಿ ನಿಗದಿ ಸಂಬಂಧ ಕಾಯ್ದೆಯನ್ನು ರೂಪಿಸಿ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…