ರಾಜ್ಯ

ಬೆಂಗಳೂರಿನಲ್ಲಿ IT, GST ದಾಳಿ : 100 ಕೋಟಿ ವಹಿವಾಟು ಪತ್ತೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ.

ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. ನಗರದ ಕೇಂದ್ರ ವಿಭಾಗ ಸೇರಿದಂತೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರಸ್ಥರ ಮಳಿಗೆಗಳ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಒಣಹಣ್ಣುಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ, ಮಾರಾಟದಲ್ಲಿ ತೆರಿಗೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅಽಕಾರಿಗಳು ತಿಳಿಸಿದ್ದಾರೆ.

ಕಳೆದ ೧೫ ದಿನಗಳಲ್ಲಿ ಬೆಂಗಳೂರಿನಲ್ಲಿ ಐಟಿ ಹಾಗೂ ಜಿಎಸ್‌ಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ೫೦೦ ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ, ೧೦೦ ಕೋಟಿ ರೂ. ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತೆರಿಗೆ ವಂಚನೆ ನಡೆಸಿದ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಮೈಸೂರು| ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳು
* ತೆರಿಗೆ ಬಿಲ್ ಇಲ್ಲದೇ ಸರಕು ಖರೀದಿ
* ಖರೀದಿ ಬಿಲ್‌ಗಳಿಗಿಂತ ಹೆಚ್ಚಾಗಿ ಸರಕು ಖರೀದಿ
* ಬಿಲ್ ನೀಡದೆ ಸರಕು ಮಾರಾಟ
* ಕಬ್ಬಿಣ, ಉಕ್ಕು, ಹಾರ್ಡ್‌ವೇರ್, ಸಿಮೆಂಟ್ ವ್ಯಾಪಾರಿಗಳಿಂದ ತೆರಿಗೆ ತಪ್ಪಿಸಲು ಮಾಲುಗಳ ಜತೆಯಲ್ಲದ ನಕಲಿ ಬಿಲ್‌ಗಳನ್ನು ನೀಡಿರುವುದು
* ಗುತ್ತಿಗೆದಾರರಿಗೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಸಹಾಯಕವಾಗುವ ನಕಲಿ ಬಿಲ್ ಜಾಲ
* ೪೦ ಲಕ್ಷ ರೂ. ಮೀರಿದ ವಹಿವಾಟು ಇದ್ದರೂ ಜಿಎಸ್‌ಟಿ ನೋಂದಣಿ ಮಾಡದೇ ವ್ಯವಹಾರ
* ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೧,೦೦೦ ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ವಶ
* ಸರಿಯಾದ ಬಿಲ್ ಇಲ್ಲದೆ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ ೭೫ ವಾಹನಗಳು ವಶಕ್ಕೆ

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago