ರಾಜ್ಯ

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಜ.25 ರಂದು ಮೈಸೂರಿನಲ್ಲಿ ಅಹಿಂದಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಯಾವ ಲೇಬಲ್‍ನಲ್ಲಿ ಅವರು ಮಾಡುತ್ತಿದ್ದಾರೆ. ಅಹಿಂದಾ ಬಗ್ಗೆ ವ್ಯಾಖ್ಯಾನ ಮಾಡಿ ವಿವರಿಸುವುದು ಕಷ್ಟ ಎಂದ ಅವರು, ಮುಖ್ಯಮಂತ್ರಿಯಾಗಿದ್ದವರು ಅಹಿಂದಾ ನಾಯಕರೇ ಆಗಿದ್ದರೇ, ಒಂದು ಕ್ಷೇತ್ರ ಹುಡುಕಲು ಒಂದು ವರ್ಷ ಕಾಲ ಎಷ್ಟು ಚರ್ಚೆ ಮಾಡಿದರು ಎಂದು ಪ್ರಶ್ನಿಸಿದರು.

ಮೈಸೂರು, ಬಾದಾಮಿ, ಕೋಲಾರ ಎಲ್ಲಿ ನಿಲ್ಲಬೇಕೆಂಬ ವರ್ಷಕಾಲ ಚರ್ಚೆ ಮಾಡಿದರು. ಅಹಿಂದಾ ನಾಯಕರೇ ಆಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ನಿಂತು ಗೆಲ್ಲಬಹುದಾಗಿತ್ತು. ಕಳೆದ ಚುನಾವಣೆಯಲ್ಲಿ ಪುತ್ರ ಸಿದ್ದರಾಮಯ್ಯ ಅವರಿಗೆ ಕ್ಷೆತ್ರ ಬಿಟ್ಟುಕೊಡಬೇಕಾಯಿತು ಎಂದರು.

ಇದನ್ನು ಓದಿ: ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಕಠಿಣವಾಗಿ ಮಾತನಾಡಿದ್ದಾರೆ. ಅವರ ಹಿರಿಯ ಮಗ ನಿಧನವಾದಾಗ ಮನೆಗೆ ಹೋಗಿದ್ದೆ. ಈ ವಯಸ್ಸಲ್ಲೂ ಎಷ್ಟು ದುಡಿಯುತ್ತಿ?ರಿ? ಎಂದು ಕೇಳಿದ್ದರು. ನೀವೆಲ್ಲಾ ಪಕ್ಷ ಬಿಟ್ಟು ಹೋದ ಮೇಲೆ ಪಕ್ಷ ಉಳಿಲು ದುಡಿಯುತ್ತಿದ್ದೇನೆ. ಹೀಗೆ ಎರಡನೇ ಪುತ್ರನನ್ನು ರಾಜಕೀಯಕ್ಕೆ ತಂದಿದ್ದಾರೆ. ಒಳಮೀಸಲಾತಿಯಲ್ಲಿ ಯಾವಯಾವ ಜಾತಿಗೆ ಎಷ್ಟೆಷ್ಟು ಮೀಸಲಾತಿ ಕೊಟ್ಟಿದ್ದೀರಿ ಎಂಬುದನ್ನು 16 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ಹೇಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದವರ್ಯಾರು?, ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸಿದವರ್ಯಾರು? ಎಂದು ಪ್ರಶ್ನಿಸಿದರು.
ಕೇರಳದಲ್ಲಿ ಜೆಡಿಎಸ್ ಪಕ್ಷ ಎಡಪಂಥೀಯ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಜ.18 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡುತ್ತೆ?ವೆ. ಜ.23 ರಂದು ಹಾಸನದಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತೆ?ವೆ. ಜ.24 ರಂದು ಬಾಗಲಕೋಟೆಯಲ್ಲಿ ಸಭೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

26 mins ago

ಮೈಸೂರು ಮೈಸೂರಾಗಿಯೇ ಇರಲು ಏನು ಮಾಡಬೇಕು? ಏನು ಮಾಡಬಾರದು?

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ…

48 mins ago

ಜಾಗತಿಕ ಕಾಮಜಾಲಗಳ ಮಾರ್ಜಾಲ ಜೆಫ್ರಿ ಎಫ್‌ಸ್ಟೀನ್‌

• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು…

1 hour ago

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…

2 hours ago

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

4 hours ago