ರಾಜ್ಯ

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಜ.25 ರಂದು ಮೈಸೂರಿನಲ್ಲಿ ಅಹಿಂದಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಯಾವ ಲೇಬಲ್‍ನಲ್ಲಿ ಅವರು ಮಾಡುತ್ತಿದ್ದಾರೆ. ಅಹಿಂದಾ ಬಗ್ಗೆ ವ್ಯಾಖ್ಯಾನ ಮಾಡಿ ವಿವರಿಸುವುದು ಕಷ್ಟ ಎಂದ ಅವರು, ಮುಖ್ಯಮಂತ್ರಿಯಾಗಿದ್ದವರು ಅಹಿಂದಾ ನಾಯಕರೇ ಆಗಿದ್ದರೇ, ಒಂದು ಕ್ಷೇತ್ರ ಹುಡುಕಲು ಒಂದು ವರ್ಷ ಕಾಲ ಎಷ್ಟು ಚರ್ಚೆ ಮಾಡಿದರು ಎಂದು ಪ್ರಶ್ನಿಸಿದರು.

ಮೈಸೂರು, ಬಾದಾಮಿ, ಕೋಲಾರ ಎಲ್ಲಿ ನಿಲ್ಲಬೇಕೆಂಬ ವರ್ಷಕಾಲ ಚರ್ಚೆ ಮಾಡಿದರು. ಅಹಿಂದಾ ನಾಯಕರೇ ಆಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ನಿಂತು ಗೆಲ್ಲಬಹುದಾಗಿತ್ತು. ಕಳೆದ ಚುನಾವಣೆಯಲ್ಲಿ ಪುತ್ರ ಸಿದ್ದರಾಮಯ್ಯ ಅವರಿಗೆ ಕ್ಷೆತ್ರ ಬಿಟ್ಟುಕೊಡಬೇಕಾಯಿತು ಎಂದರು.

ಇದನ್ನು ಓದಿ: ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಕಠಿಣವಾಗಿ ಮಾತನಾಡಿದ್ದಾರೆ. ಅವರ ಹಿರಿಯ ಮಗ ನಿಧನವಾದಾಗ ಮನೆಗೆ ಹೋಗಿದ್ದೆ. ಈ ವಯಸ್ಸಲ್ಲೂ ಎಷ್ಟು ದುಡಿಯುತ್ತಿ?ರಿ? ಎಂದು ಕೇಳಿದ್ದರು. ನೀವೆಲ್ಲಾ ಪಕ್ಷ ಬಿಟ್ಟು ಹೋದ ಮೇಲೆ ಪಕ್ಷ ಉಳಿಲು ದುಡಿಯುತ್ತಿದ್ದೇನೆ. ಹೀಗೆ ಎರಡನೇ ಪುತ್ರನನ್ನು ರಾಜಕೀಯಕ್ಕೆ ತಂದಿದ್ದಾರೆ. ಒಳಮೀಸಲಾತಿಯಲ್ಲಿ ಯಾವಯಾವ ಜಾತಿಗೆ ಎಷ್ಟೆಷ್ಟು ಮೀಸಲಾತಿ ಕೊಟ್ಟಿದ್ದೀರಿ ಎಂಬುದನ್ನು 16 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ಹೇಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದವರ್ಯಾರು?, ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸಿದವರ್ಯಾರು? ಎಂದು ಪ್ರಶ್ನಿಸಿದರು.
ಕೇರಳದಲ್ಲಿ ಜೆಡಿಎಸ್ ಪಕ್ಷ ಎಡಪಂಥೀಯ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಜ.18 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡುತ್ತೆ?ವೆ. ಜ.23 ರಂದು ಹಾಸನದಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತೆ?ವೆ. ಜ.24 ರಂದು ಬಾಗಲಕೋಟೆಯಲ್ಲಿ ಸಭೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

8 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

8 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

9 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

10 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

10 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

12 hours ago