ರಾಜ್ಯ

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಜ.25 ರಂದು ಮೈಸೂರಿನಲ್ಲಿ ಅಹಿಂದಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಯಾವ ಲೇಬಲ್‍ನಲ್ಲಿ ಅವರು ಮಾಡುತ್ತಿದ್ದಾರೆ. ಅಹಿಂದಾ ಬಗ್ಗೆ ವ್ಯಾಖ್ಯಾನ ಮಾಡಿ ವಿವರಿಸುವುದು ಕಷ್ಟ ಎಂದ ಅವರು, ಮುಖ್ಯಮಂತ್ರಿಯಾಗಿದ್ದವರು ಅಹಿಂದಾ ನಾಯಕರೇ ಆಗಿದ್ದರೇ, ಒಂದು ಕ್ಷೇತ್ರ ಹುಡುಕಲು ಒಂದು ವರ್ಷ ಕಾಲ ಎಷ್ಟು ಚರ್ಚೆ ಮಾಡಿದರು ಎಂದು ಪ್ರಶ್ನಿಸಿದರು.

ಮೈಸೂರು, ಬಾದಾಮಿ, ಕೋಲಾರ ಎಲ್ಲಿ ನಿಲ್ಲಬೇಕೆಂಬ ವರ್ಷಕಾಲ ಚರ್ಚೆ ಮಾಡಿದರು. ಅಹಿಂದಾ ನಾಯಕರೇ ಆಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ನಿಂತು ಗೆಲ್ಲಬಹುದಾಗಿತ್ತು. ಕಳೆದ ಚುನಾವಣೆಯಲ್ಲಿ ಪುತ್ರ ಸಿದ್ದರಾಮಯ್ಯ ಅವರಿಗೆ ಕ್ಷೆತ್ರ ಬಿಟ್ಟುಕೊಡಬೇಕಾಯಿತು ಎಂದರು.

ಇದನ್ನು ಓದಿ: ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಕಠಿಣವಾಗಿ ಮಾತನಾಡಿದ್ದಾರೆ. ಅವರ ಹಿರಿಯ ಮಗ ನಿಧನವಾದಾಗ ಮನೆಗೆ ಹೋಗಿದ್ದೆ. ಈ ವಯಸ್ಸಲ್ಲೂ ಎಷ್ಟು ದುಡಿಯುತ್ತಿ?ರಿ? ಎಂದು ಕೇಳಿದ್ದರು. ನೀವೆಲ್ಲಾ ಪಕ್ಷ ಬಿಟ್ಟು ಹೋದ ಮೇಲೆ ಪಕ್ಷ ಉಳಿಲು ದುಡಿಯುತ್ತಿದ್ದೇನೆ. ಹೀಗೆ ಎರಡನೇ ಪುತ್ರನನ್ನು ರಾಜಕೀಯಕ್ಕೆ ತಂದಿದ್ದಾರೆ. ಒಳಮೀಸಲಾತಿಯಲ್ಲಿ ಯಾವಯಾವ ಜಾತಿಗೆ ಎಷ್ಟೆಷ್ಟು ಮೀಸಲಾತಿ ಕೊಟ್ಟಿದ್ದೀರಿ ಎಂಬುದನ್ನು 16 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ಹೇಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದವರ್ಯಾರು?, ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸಿದವರ್ಯಾರು? ಎಂದು ಪ್ರಶ್ನಿಸಿದರು.
ಕೇರಳದಲ್ಲಿ ಜೆಡಿಎಸ್ ಪಕ್ಷ ಎಡಪಂಥೀಯ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಜ.18 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡುತ್ತೆ?ವೆ. ಜ.23 ರಂದು ಹಾಸನದಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತೆ?ವೆ. ಜ.24 ರಂದು ಬಾಗಲಕೋಟೆಯಲ್ಲಿ ಸಭೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago