ರಾಜ್ಯ

ಯತ್ನಾಳ್‌ ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ: ಪ್ರಹ್ಲಾದ್ ಜೋಶಿ

ದಾವಣಗೆರೆ: ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಪಕ್ಷ ನಾಯಕರು ಹಾಗೂ ರಾಜ್ಯಾಧ್ಯಕ್ಷರ ವಿರುದ್ಧ ಪದೇ-ಪದೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಾ ಬರುತ್ತಿದ್ದು, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಕೊವಿಡ್‌ ಸಂದರ್ಭದಲ್ಲಿ ೪೦ ಸಾವಿರ ಕೋಟಿ ರೂ ಹಗರಣ ನಡೆದಿದೆ ಮತ್ತು ಇತ್ತೀಚೆಗೆ ನಡೆದ ಬಿಜೆಪಿ ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಬಣದವರಿಗೆ ಮಾತ್ರ ಸ್ಥಾನ ನೀಡಲಾಗಿದೆ ಎಂದು ದೂರಿದ್ದರು.

ಇದರ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಯತ್ನಾಳ್‌ ಆರೋಪಗಳ ಬಗ್ಗೆ ಮಾತನಾಡಿದ್ದು, ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಯತ್ನಾಳ್‌ ಅವರನ್ನು ಕರೆದು ಮಾತನಾಡುವ ಕೆಲಸವನ್ನು ರಾಷ್ಟ್ರೀಯ ಅಧ್ಯಕ್ಷರು ಮಾಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರಿಗಾದರೂ ದೂರು-ದುಮ್ಮಾನಗಳಿದ್ದರೆ, ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರ ಜೊತೆ ಮಾತನಾಡಿ, ಅದನ್ನು ಬಿಟ್ಟು ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿಯ ಹಿತಕಾಯುವವರು ತಮ್ಮ ಬಹಿರಂಗ ಹೇಳಿಕ ನೀಡುವುದು ತಕ್ಷಣವೇ ನಿಲ್ಲಿಸಬೇಕು. ರಾಜ್ಯಾಧ್ಯಕ್ಷರ ನೇಮಕವನ್ನು ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠರು, ಪ್ರಧಾನಿ ಮೋದಿ ಅವರು ಚರ್ಚೆ ಮಾಡಿಯೇ ಆಯ್ಕೆ ಮಾಡಿರುವುದು. ಇದು ರಾಷ್ಟ್ರೈ ಘಟಕದ ನಿರ್ಣಯ. ನಿಮಗೆ ಎಲ್ಲಾದರೂ ತಪ್ಪುಗಳು ಕಂಡುಬಂದಲ್ಲಿ ಹೈಕಮಾಂಡ್‌ ಭೇಟಿಯಾಗಿ ಅದುಬಿಟ್ಟು ಬಹಿರಂಗ ಹೇಳಿಕೆ ಸರಿಯಲ್ಲ ಎಂದು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ಬುರುಡೆ ಸರ್ಕಾರ ಎಂದು ಟೀಕಿಸಿದ ಬಗ್ಗೆ, ೧೯೭೧ ರಿಂದ ಗರಿಬಿ ಹಟಾವೋ ಎಂದು ಹೇಳಿದವರು ನೀವು, ಕೇಂದ್ರದಲ್ಲಿ ಸರ್ಕಾರ ಹಲವಾರು ವರ್ಷಗಳು ಕಾಂಗ್ರೆಸ್‌ ಆಡಳಿತ ನಡೆಸಿದರು ಸಹಾ ಒಂದು ಗ್ಯಾಸ್‌ ನೀಡಲು ಆಗಿಲ್ಲ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಗ್ಯಾಸ್‌ ಸಂಪರ್ಕಕ್ಕೆ ಹರ ಸಾಹಸ ಪಡುವ ಸ್ಥಿತಿಯಿತ್ತು. ೧೯೬೦ ರಿಂದ ಇಲ್ಲಿಯವರೆಗೆ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವವರೆಗೂ ನಮ್ಮ ದೇಶದಲ್ಲಿ ಸೂರು ಇಲ್ಲದವರಿಗೆ ಸೂರು ಎಂದು ಹೇಳಿಕೊಂಡೆ ಬಂದಿದ್ದಾರೆ. ಇಂದಿರಾ ಆವಾಸ್‌ ಯೋಜನೆಯಡಿ ಮೂರು ಕೋಟಿ ಮೂವತ್ತು ಲಕ್ಷ ಮನೆಗಳನ್ನು ಕೊಟ್ಟಿದ್ದೇವೆ ಎಂದು ಲೆಕ್ಕ ಕೊಟ್ಟಿದ್ದಾರೆ.

ಆದರೆ ಪ್ರಧಾನಿ ಮೋದಿ ಆಡಳಿತದಲ್ಲಿ ಕಳೆದ ವರ್ಷದಲ್ಲಿ ನಾಲ್ಕು ಕೋಟಿ ಮನೆಗಳನ್ನು ನಾವು ಕೊಟ್ಟಿದ್ದೇವೆ ಸ್ವಾಮಿ. ಈಗ ಹೇಳಿ ಯಾರದ್ದು ಬುರುಡೆ ಸರ್ಕಾರ ಎಂದು, ಸಿಎಂ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ತಮಮ್‌ ವೈಫಲ್ಯಗಳನ್ನು ಮುಚ್ಚಿಹಾಕಲು ಸಿಎಂ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಟೀಕಿಸಿದರು.

andolanait

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

1 hour ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

2 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

6 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

11 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

11 hours ago