It is not true that the government has no money: Former MP D.K. Suresh
ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ ಬಳಿ ಹಣ ಇಲ್ಲ ಎಂದು ಹೇಳುವುದು ಸರಿಯಲ್ಲ, ಹಿಂದಿನ ಸರ್ಕಾರ ಮೂರ್ನಾಲ್ಕು ವರ್ಷಗಳಾದರೂ ಬಾಕಿ ತೀರಿಸಲಾಗದಷ್ಟು ಕಾಮಗಾರಿಗಳನ್ನು ಮಂಜೂರು ಮಾಡಿದೆ. ನಗರಾಭಿವೃದ್ಧಿ ಇಲಾಖೆಯಲ್ಲಿ 5 ವರ್ಷಗಳಿಗಾಗುವಷ್ಟು ಕಾಮಗಾರಿಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರಾತಿ ನೀಡಿವೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ 10 ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಿದೆ. ನೀರಾವರಿ ಇಲಾಖೆಯಲ್ಲಿ ಒಂದು ಲಕ್ಷ ಕೋಟಿ ರೂ.ನಷ್ಟು ಮಂಜೂರಾತಿಯಾಗಿದೆ. ಇದನ್ನು ತೀರಿಸಲು ನಮ್ಮ ಸರ್ಕಾರ ಹಣ ನೀಡಬೇಕು. ಬಿಜೆಪಿ ಸರ್ಕಾರ ಹಣ ಇಟ್ಟು ಹೋಗಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…