Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ-ಡಿಸಿಎಂ ನಡುವಿನ ಕಿತ್ತಾಟ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿಎಂ ಹಾಗೂ ಡಿಸಿಎಂ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಇದು ತಾರಕಕ್ಕೇರಿದೆ. ಸಿದ್ದರಾಮಯ್ಯ ತಾನೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ ಡಿಸಿಎಂ ಡಿಕೆಶಿ ಒಳ್ಳೆಯದಾಗಲಿ ಎಂದಿದ್ದಾರೆ. ಆದರೆ ಸಚಿವರ, ಶಾಸಕರ ಪ್ರತ್ಯೇಕ ಸಭೆಗಳನ್ನು ಮಾಡಿ ಬೆಂಬಲ ಪಡೆಯುವ ಪ್ಲಾನ್ ಮಾಡುತ್ತಿದ್ದಾರೆ. ಸಾಲದ್ದಕ್ಕೆ ನಿನ್ನೆ ಜೈಲಿಗೆ ಹೋಗಿ ಅಲ್ಲಿರುವ ಇಬ್ಬರು ಶಾಸಕರು ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್ಗೆ ಇಂತಹ ಪಾಡು ಬಂದಿರುವುದು ಶೋಚನೀಯ ಸ್ಥಿತಿ ಎಂದು ಗುಡುಗಿದರು.
ಡಿಸಿಎಂ ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಜೈಲು ಪಾಲಾಗಿರುವ ಶಾಸಕರ ಬೆಂಬಲ ಕೇಳಲು ಜೈಲಿಗೆ ಹೋಗಿ ಚರ್ಚಿಸಿದ್ದಾರೆ ಎಂದರೆ ರಾಜ್ಯದ ಜನತೆ ತೀರ್ಮಾನ ಮಾಡಬೇಕು. ರಾಜ್ಯದ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲ್ಲ ಎಂದು ವಾಗ್ದಾಳಿ ನಡೆಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…