ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್ ಬಿನ್ ತುಘಲಕ್ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು.
ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಪೋಸ್ಟ್ ಪದೇ ಪದೇ ಬದಲಾಗುತ್ತಿದ್ದು, ತಮ್ಮ ನಿಲುವುಗಳನ್ನು ಬದಲಿಸುತ್ತಿದ್ದಾರೆ. ಈ ಬೆಳವಣಿಗೆ ರಾಜ್ಯಕ್ಕೆ ಒಳಿತಾಗುವುದಿಲ್ಲ. ಇದೊಂದು ತುಘಲಕ್ ರೀತಿಯ ಆಡಳಿತ ವ್ಯವಸ್ಥೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದಕ್ಕೆ ಸದನದಲ್ಲೇ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಇಲ್ಲಿ ಇರುವುದು ಕೇವಲ ಸಿದ್ದರಾಮಯ್ಯ ಸರ್ಕಾರವೇ ಹೊರತು ಯಾವುದೇ ತುಘಲಕ್ ಸರ್ಕಾರವಲ್ಲ. ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕದ ಬಗ್ಗೆ ಸಚಿವ ಸಂಪುಟದಲ್ಲಿ ಸಮಗ್ರವಾದ ಚರ್ಚೆಯಾಗಿಲ್ಲ. ಆ ಕೂಡಲೇ ಇದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಗೊಂದಲ ಉಂಟಾಗಿತ್ತು. ಮುಂದಿನ ಸಂಪುಟದಲ್ಲಿ ಕೂಲಂಕುಷವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಮೂಲಕ ಎಲ್ಲಾ ಗೊಂದಲಗಳನ್ನು ನಿವಾರಿಸುವ ಕೆಲಸ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…