ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್ ಬಿನ್ ತುಘಲಕ್ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು.
ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಪೋಸ್ಟ್ ಪದೇ ಪದೇ ಬದಲಾಗುತ್ತಿದ್ದು, ತಮ್ಮ ನಿಲುವುಗಳನ್ನು ಬದಲಿಸುತ್ತಿದ್ದಾರೆ. ಈ ಬೆಳವಣಿಗೆ ರಾಜ್ಯಕ್ಕೆ ಒಳಿತಾಗುವುದಿಲ್ಲ. ಇದೊಂದು ತುಘಲಕ್ ರೀತಿಯ ಆಡಳಿತ ವ್ಯವಸ್ಥೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದಕ್ಕೆ ಸದನದಲ್ಲೇ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಇಲ್ಲಿ ಇರುವುದು ಕೇವಲ ಸಿದ್ದರಾಮಯ್ಯ ಸರ್ಕಾರವೇ ಹೊರತು ಯಾವುದೇ ತುಘಲಕ್ ಸರ್ಕಾರವಲ್ಲ. ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕದ ಬಗ್ಗೆ ಸಚಿವ ಸಂಪುಟದಲ್ಲಿ ಸಮಗ್ರವಾದ ಚರ್ಚೆಯಾಗಿಲ್ಲ. ಆ ಕೂಡಲೇ ಇದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಗೊಂದಲ ಉಂಟಾಗಿತ್ತು. ಮುಂದಿನ ಸಂಪುಟದಲ್ಲಿ ಕೂಲಂಕುಷವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಮೂಲಕ ಎಲ್ಲಾ ಗೊಂದಲಗಳನ್ನು ನಿವಾರಿಸುವ ಕೆಲಸ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…