ರಾಜ್ಯ

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.

ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್‍ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.

ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ?. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.

ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡ್ರ್ಯಾಗನ್‌ ಪಾಂಡ್‌ ಉದ್ಘಾಟಿಸಿದ ಸಿಎಂ ; ಲೇಸರ್‌ನಲ್ಲಿ ಸಿದ್ಧರಾಮಯ್ಯ ಯಶೋಗಾಥೆ

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದಿಲ್ಲಿ ಗಲಭೆ ಪ್ರಕರಣ | ಉಮರ್‌ ಖಾಲಿದ್‌, ಶಾರ್ಜೀಲ್‌ ಇಮಾನ್‌ ಜಾಮೀನಿಗೆ ಸುಪ್ರೀಂ ನಕಾರ

ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್…

8 hours ago

ದೇವರಾಜ ಅರಸು ಎಲ್ಲಿ? ಇವರೆಲ್ಲಿ? : ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ…

8 hours ago

ಕೋಗಿಲು ಲೇಔಟ್‌ನಲ್ಲಿ ಅಕ್ರಮ ವಲಸಿಗರು ಇದ್ದದ್ದು ನಿಜ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ…

9 hours ago

ʻವೆಲ್ ಸ್ಪೋರ್ಟ್ಸ್ʼ ಮೂಲಕ ಹೊಸ ಅಧ್ಯಾಯ ಆರಂಭಿಸಿದ ಚಿನ್ನದ ಹುಡುಗ ʼನೀರಜ್ ಚೋಪ್ರಾʼ

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…

10 hours ago

ಸಮಾಜ ಬದಲಾವಣೆಗೆ ಶಿಕ್ಷಣ ಅಗತ್ಯ : ಸಿಎಂ ಪ್ರತಿಪಾದನೆ

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

10 hours ago