Mysore
28
light rain

Social Media

ಗುರುವಾರ, 11 ಜೂನ್ 2026
Light
Dark

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಮುಸ್ಲಿಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಇರುವುದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದು ಹೇಳಿದರು.

ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ. ಸಿಎಂ, ಡಿಸಿಎಂ ಸಂಪುಟ ಪುನಾರಚನೆ ವಿಚಾರಲದಲ್ಲಿ ಗೊಂದವಲಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ. ಎಲ್ಲವೂ ಸರಿಯಾಗುತ್ತದೆ. ನಮ್ಮ ಹೈಕಮಾಂಡ್‌ ಎಲ್ಲವನ್ನೂ ಬಗೆಹರಿಸುತ್ತಾರೆ ಎಂದು ಹೇಳಿದರು.

 

Tags:
error: Content is protected !!