ರಾಜ್ಯ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ವಲಸಿಗರು ಇದ್ದದ್ದು ನಿಜ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.

ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ ಪುನರ್‍ವಸತಿ ಕಲ್ಪಿಸಿಕೊಡಲು ಮುಂದಾಗಿದೆ ಎಂಬುದನ್ನು ಅವರು ಬಲವಾಗಿ ಸಮರ್ಥನೆ ಮಾಡಿಕೊಂಡರು.

ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್‍ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.

ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.

ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ಬಾಂಗ್ಲಾದೇಶದವರು ನೆಲೆಸಿದ್ದಾರೆ ಎನ್ನುವುದು ಊಹಾಪೋಹ. ಊಹಾಪೋಹಗಳ ಮೇಲೆ ಹೇಳಿಕೆ ಮಾಡಬಾರದು. ರಾಜ್ಯದವರು ಯಾರು?, ಹೊರ ರಾಜ್ಯದವರು ಯಾರು ಇದ್ದಾರೆ? ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿ. ವಸೀಂ ನನ್ನ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಯಾರೇ ಭಾಗಿಯಾಗಿದರೂ ಕಾನೂನು ಕ್ರಮ ನಡೆಯಲಿ. ಬಿಜೆಪಿ ಕಾರ್ಯಕರ್ತರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕ್ರಮ ಆಗಲಿ ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

4 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

4 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

5 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

5 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

5 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

5 hours ago