ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.
ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ ಪುನರ್ವಸತಿ ಕಲ್ಪಿಸಿಕೊಡಲು ಮುಂದಾಗಿದೆ ಎಂಬುದನ್ನು ಅವರು ಬಲವಾಗಿ ಸಮರ್ಥನೆ ಮಾಡಿಕೊಂಡರು.
ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.
ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.
ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.
ಬಾಂಗ್ಲಾದೇಶದವರು ನೆಲೆಸಿದ್ದಾರೆ ಎನ್ನುವುದು ಊಹಾಪೋಹ. ಊಹಾಪೋಹಗಳ ಮೇಲೆ ಹೇಳಿಕೆ ಮಾಡಬಾರದು. ರಾಜ್ಯದವರು ಯಾರು?, ಹೊರ ರಾಜ್ಯದವರು ಯಾರು ಇದ್ದಾರೆ? ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿ. ವಸೀಂ ನನ್ನ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಯಾರೇ ಭಾಗಿಯಾಗಿದರೂ ಕಾನೂನು ಕ್ರಮ ನಡೆಯಲಿ. ಬಿಜೆಪಿ ಕಾರ್ಯಕರ್ತರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…