ರಾಜ್ಯ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ವಲಸಿಗರು ಇದ್ದದ್ದು ನಿಜ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.

ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ ಪುನರ್‍ವಸತಿ ಕಲ್ಪಿಸಿಕೊಡಲು ಮುಂದಾಗಿದೆ ಎಂಬುದನ್ನು ಅವರು ಬಲವಾಗಿ ಸಮರ್ಥನೆ ಮಾಡಿಕೊಂಡರು.

ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್‍ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.

ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.

ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ಬಾಂಗ್ಲಾದೇಶದವರು ನೆಲೆಸಿದ್ದಾರೆ ಎನ್ನುವುದು ಊಹಾಪೋಹ. ಊಹಾಪೋಹಗಳ ಮೇಲೆ ಹೇಳಿಕೆ ಮಾಡಬಾರದು. ರಾಜ್ಯದವರು ಯಾರು?, ಹೊರ ರಾಜ್ಯದವರು ಯಾರು ಇದ್ದಾರೆ? ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿ. ವಸೀಂ ನನ್ನ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಯಾರೇ ಭಾಗಿಯಾಗಿದರೂ ಕಾನೂನು ಕ್ರಮ ನಡೆಯಲಿ. ಬಿಜೆಪಿ ಕಾರ್ಯಕರ್ತರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕ್ರಮ ಆಗಲಿ ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago