ಬೆಂಗಳೂರು: ಲಂಚ, ಭ್ರಷ್ಟಾಚಾರದ ಪ್ರಯತ್ನ ಹಾಗೂ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಅರೋಪದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸುಧಾಕರ ಆಪ್ತ, ಬಿಜೆಪಿ ಮಾಜಿ ಜಿಲ್ಲಾದ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ಏ. 25 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿ 4.82 ಕೋಟಿ ಹಣವನ್ನು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಉತ್ತರ ತಾಲ್ಲೂಕಿನ ಚುನಾವಣಾ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ವಾಟ್ಸ್ ಆಪ್ ಕರೆಮಾಡಿ ಗೋವಿಂದಪ್ಪಗೆ ಸಹಾಯ ಮಾಡಿ, ಹಣ ವಾಪಸ್ ಕೊಡಿಸುವಂತೆ ಹೇಳಿದ್ದಾರೆ. ಅಲ್ಲದೇ ಗೋವಿಂದಪ್ಪ ಕೂಡ ಮೌದ್ಗಿಲ್ ಅವರಿಗೆ ವಾಟ್ಸ್ ಆಪ್ ಮೂಲಕ ನನಗೆ ಸಹಾಯ ಮಾಡಿ ಅಂತ ಸಂದೇಶ ಕಳುಹಿಸಿದ್ದಾರೆ.
ಈ ಎಲ್ಲಾ ಮಾಹಿತಿಯನ್ನು ಸಾಕ್ಷಿ ಸಮೇತ ಮೌದ್ಗಿಲ್ ಅವರು ಐಟಿ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಎಸ್ಎಸ್ ಟಿ ಅಧಿಕಾರಿ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಚಾರದ ಪ್ರಯತ್ನ ಮಾಡಿದ್ದಕ್ಕಾಗಿ ಆರ್ ಪಿ ಕಾಯಿದೆ 1951 ರ ಸೆಕ್ಷನ್ 171ಬಿ, 171ಸಿ ಅಡಿಯ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…