ಬೆಂಗಳೂರು: ಲಂಚ, ಭ್ರಷ್ಟಾಚಾರದ ಪ್ರಯತ್ನ ಹಾಗೂ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಅರೋಪದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸುಧಾಕರ ಆಪ್ತ, ಬಿಜೆಪಿ ಮಾಜಿ ಜಿಲ್ಲಾದ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ಏ. 25 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿ 4.82 ಕೋಟಿ ಹಣವನ್ನು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಉತ್ತರ ತಾಲ್ಲೂಕಿನ ಚುನಾವಣಾ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ವಾಟ್ಸ್ ಆಪ್ ಕರೆಮಾಡಿ ಗೋವಿಂದಪ್ಪಗೆ ಸಹಾಯ ಮಾಡಿ, ಹಣ ವಾಪಸ್ ಕೊಡಿಸುವಂತೆ ಹೇಳಿದ್ದಾರೆ. ಅಲ್ಲದೇ ಗೋವಿಂದಪ್ಪ ಕೂಡ ಮೌದ್ಗಿಲ್ ಅವರಿಗೆ ವಾಟ್ಸ್ ಆಪ್ ಮೂಲಕ ನನಗೆ ಸಹಾಯ ಮಾಡಿ ಅಂತ ಸಂದೇಶ ಕಳುಹಿಸಿದ್ದಾರೆ.
ಈ ಎಲ್ಲಾ ಮಾಹಿತಿಯನ್ನು ಸಾಕ್ಷಿ ಸಮೇತ ಮೌದ್ಗಿಲ್ ಅವರು ಐಟಿ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಎಸ್ಎಸ್ ಟಿ ಅಧಿಕಾರಿ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಚಾರದ ಪ್ರಯತ್ನ ಮಾಡಿದ್ದಕ್ಕಾಗಿ ಆರ್ ಪಿ ಕಾಯಿದೆ 1951 ರ ಸೆಕ್ಷನ್ 171ಬಿ, 171ಸಿ ಅಡಿಯ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…