ರಾಜ್ಯ

ಕುರುಬರನ್ನು STಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಟ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು.

ಇದನ್ನು ಓದಿ : ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.‌

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

10 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago