ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ ವದಂತಿಗಳು ಮಾತ್ರ ಎಂದು ವಸತಿ ಸಚಿವ ಜಮೀರ್ ಅಹಮದ್ಖಾನ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಏನು ಕಡಿಮೆ ಮಾಡಿದೆ ಎಂದು ನಾನು ಬೇರೆ ಪಕ್ಷಕ್ಕೆ ಹೋಗಬೇಕೆಂದು ಪ್ರಶ್ನಿಸಿದ್ದಾರೆ.
2017ರಲ್ಲಿ ತಾವು ಕಾಂಗ್ರೆಸ್ಗೆ ಬಂದಿದ್ದು 2018ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ನನ್ನನ್ನು ಮಂತ್ರಿ ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ನನ್ನನ್ನು ಸಚಿವನ್ನಾಗಿ ಮಾಡಿ, ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳು, ಹಜ್ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿ 5 ಖಾತೆಗಳನ್ನು ನೀಡಲಾಗಿತ್ತು. 2023ರಲ್ಲಿ ಮತ್ತೆ ನನ್ನನ್ನು ಮಂತ್ರಿ ಮಾಡಿ 4 ಖಾತೆಗಳನ್ನು ನೀಡಿದ್ದಾರೆ. ನಾನು ಇದನ್ನೆಲ್ಲಾ ಹೇಗೆ ಮರೆಯಲಿ ಎಂದು ಪ್ರಶ್ನಿಸಿದರು.
ಆರಂಭದಲ್ಲಿ ಜೆಡಿಎಸ್-ಬಿಜೆಪಿ ಸಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನು ಮಂತ್ರಿ ಮಾಡಿ, ಹಜ್ ಮತ್ತು ವಕ್ಪ್ ಎಂಬ ಎರಡು ಖಾತೆಗಳನ್ನು ಮಾತ್ರ ನೀಡಿದ್ದರು. ಕಾಂಗ್ರೆಸ್ ಪಕ್ಷ ನನಗೆ ಏನನ್ನೂ ಕಡಿಮೆ ಮಾಡಿಲ್ಲ ಎಂದರು.
ಅಹಮದ್ಖಾನ್, ಥೋ…ಥೋ….ಥೋ… ಇದೆಲ್ಲಾ ಊಹಾಪೋಹ. ನಾನು ಆ ಪಕ್ಷವನ್ನು ಬಿಟ್ಟು ಬಂದಿದ್ದೇನೆ. ಮತ್ತೆ ಏಕೆ ಹೋಗಲಿ? ಕುಮಾರಸ್ವಾಮಿ ಅವರ ಜೊತೆ ರಹಸ್ಯ ಮಾತುಕತೆ ಮಾಡುವ ಅಗತ್ಯ ಏನಿದೆ ಎಂದು ತಾವೇ ಪ್ರಶ್ನಿಸಿದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…