ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ ವದಂತಿಗಳು ಮಾತ್ರ ಎಂದು ವಸತಿ ಸಚಿವ ಜಮೀರ್ ಅಹಮದ್ಖಾನ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಏನು ಕಡಿಮೆ ಮಾಡಿದೆ ಎಂದು ನಾನು ಬೇರೆ ಪಕ್ಷಕ್ಕೆ ಹೋಗಬೇಕೆಂದು ಪ್ರಶ್ನಿಸಿದ್ದಾರೆ.
2017ರಲ್ಲಿ ತಾವು ಕಾಂಗ್ರೆಸ್ಗೆ ಬಂದಿದ್ದು 2018ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ನನ್ನನ್ನು ಮಂತ್ರಿ ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ನನ್ನನ್ನು ಸಚಿವನ್ನಾಗಿ ಮಾಡಿ, ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳು, ಹಜ್ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿ 5 ಖಾತೆಗಳನ್ನು ನೀಡಲಾಗಿತ್ತು. 2023ರಲ್ಲಿ ಮತ್ತೆ ನನ್ನನ್ನು ಮಂತ್ರಿ ಮಾಡಿ 4 ಖಾತೆಗಳನ್ನು ನೀಡಿದ್ದಾರೆ. ನಾನು ಇದನ್ನೆಲ್ಲಾ ಹೇಗೆ ಮರೆಯಲಿ ಎಂದು ಪ್ರಶ್ನಿಸಿದರು.
ಆರಂಭದಲ್ಲಿ ಜೆಡಿಎಸ್-ಬಿಜೆಪಿ ಸಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನು ಮಂತ್ರಿ ಮಾಡಿ, ಹಜ್ ಮತ್ತು ವಕ್ಪ್ ಎಂಬ ಎರಡು ಖಾತೆಗಳನ್ನು ಮಾತ್ರ ನೀಡಿದ್ದರು. ಕಾಂಗ್ರೆಸ್ ಪಕ್ಷ ನನಗೆ ಏನನ್ನೂ ಕಡಿಮೆ ಮಾಡಿಲ್ಲ ಎಂದರು.
ಅಹಮದ್ಖಾನ್, ಥೋ…ಥೋ….ಥೋ… ಇದೆಲ್ಲಾ ಊಹಾಪೋಹ. ನಾನು ಆ ಪಕ್ಷವನ್ನು ಬಿಟ್ಟು ಬಂದಿದ್ದೇನೆ. ಮತ್ತೆ ಏಕೆ ಹೋಗಲಿ? ಕುಮಾರಸ್ವಾಮಿ ಅವರ ಜೊತೆ ರಹಸ್ಯ ಮಾತುಕತೆ ಮಾಡುವ ಅಗತ್ಯ ಏನಿದೆ ಎಂದು ತಾವೇ ಪ್ರಶ್ನಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…