ರಾಜ್ಯ

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ: ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ ಎಂದ ಡಿಕೆಶಿ!

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.

ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.

ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.

ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.

ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.

ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.

ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago