ರಾಜ್ಯ

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ: ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ ಎಂದ ಡಿಕೆಶಿ!

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.

ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.

ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.

ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.

ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.

ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.

ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago