ಬೆಂಗಳೂರು: ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.
ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.
ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.
ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.
ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.
ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.
ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.
ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…