ರಾಜ್ಯ

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ: ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ ಎಂದ ಡಿಕೆಶಿ!

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.

ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.

ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.

ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.

ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.

ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.

ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

12 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

13 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

13 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

14 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

14 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

14 hours ago