ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.
ಇಂದು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಕುಂದಾನಗರಿ ಬೆಳಗಾವಿಯ ಸಿಪಿಇಡಿ ಮೈದಾನವು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧವಾಗಿದೆ.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಇನ್ನು ಈ ಸಮಾವೇಶಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಕಾರಣ ಗೈರಾಗಿದ್ದಾರೆ. ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 3500ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…