ರಾಜ್ಯ

ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಐತಿಹಾಸಿಕ ಸಮಾವೇಶವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಾವೇಶಕ್ಕೆ 2 ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಶತಮಾನೋತ್ಸವದ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸಚಿವ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್‌ ಈ ಸಮಾವೇಶದ ಸಿದ್ದತೆ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.

ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್‌.ಅಂಬೇಡ್ಕರ್‌ ಅವರ ತತ್ವ ಆದರ್ಶಗಳನ್ನು ಜನರಿಗೆ ತಿಳಿಸುವ ಆಗತ್ಯವಿದೆ. ನಾವು ಈಗಿರಲು ಕಾರಣವೇ ಸಂವಿಧಾನ. ನಾವು ಸಂವಿಧಾನದ ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುಶಃ ಜೋಶಿ ಅವರಿಗೆ ಇತಿಹಾಸ ತಿಳಿದಿಲ್ಲ ಅನಿಸುತ್ತದೆ. ಸಂವಿಧಾನದ ಬಗ್ಗೆ ಸಾವರ್ಕರ್‌, ಗೋಲ್ವಾಲ್ಕರ್‌ ಅವರಗಿರುವ ಅಭಿಪ್ರಾಯ ಇವರಿಗೆ ತಿಳಿದಿಲ್ಲವೇನೊ ಎಂದು ಪ್ರಶ್ನಿಸಿದರು.

ಇನ್ನು ʼಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರ ಇದೆʼ ಎಂಬ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಇವರು ಇತಿಹಾಸ ಓದಿಯೇ ಇಲ್ಲ ಹಾಗಾಗಿಯೇ ಈ ರೀತಿ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

8 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

14 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

14 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago