ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಾವೇಶಕ್ಕೆ 2 ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಶತಮಾನೋತ್ಸವದ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್ ಈ ಸಮಾವೇಶದ ಸಿದ್ದತೆ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.
ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್.ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಜನರಿಗೆ ತಿಳಿಸುವ ಆಗತ್ಯವಿದೆ. ನಾವು ಈಗಿರಲು ಕಾರಣವೇ ಸಂವಿಧಾನ. ನಾವು ಸಂವಿಧಾನದ ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ನವರು ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುಶಃ ಜೋಶಿ ಅವರಿಗೆ ಇತಿಹಾಸ ತಿಳಿದಿಲ್ಲ ಅನಿಸುತ್ತದೆ. ಸಂವಿಧಾನದ ಬಗ್ಗೆ ಸಾವರ್ಕರ್, ಗೋಲ್ವಾಲ್ಕರ್ ಅವರಗಿರುವ ಅಭಿಪ್ರಾಯ ಇವರಿಗೆ ತಿಳಿದಿಲ್ಲವೇನೊ ಎಂದು ಪ್ರಶ್ನಿಸಿದರು.
ಇನ್ನು ʼಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರ ಇದೆʼ ಎಂಬ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಇವರು ಇತಿಹಾಸ ಓದಿಯೇ ಇಲ್ಲ ಹಾಗಾಗಿಯೇ ಈ ರೀತಿ ಹೇಳಿಕೆಗಳನ್ನು ನೀಡುತ್ತಾರೆ ಎಂದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…