ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಎರಡೂ ದಿನಗಳಿಂದ ನಡೆಯುತ್ತಿದ್ದು, ಎಸ್ಪಿಪಿ ಪ್ರತಿವಾದಕ್ಕೆ ಅವಕಾಶ ಕೇಳಿದ್ದರಿಂದ ಅ.8 ಕ್ಕೆ ಮುಂದೂಡಲಾಗಿದೆ ಎಂದು 57ನೇ ಸಿಸಿಎಚ್ ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ(ಅ.4) ಮತ್ತು ಇಂದು ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಚಾರ್ಜ್ಶೀಟ್ನಲ್ಲಿರುವ ಲೂಫೋಲ್ಗಳ ಆಧಾರದ ಮೂಲಕ ಸುದೀರ್ಘ ನ್ಯಾಯ ಮಂಡಿಸಲಾಗಿದೆ. ಬಳಿಕ ಪ್ರತಿವಾದಕ್ಕೆ ಎಸ್ಪಿಪಿ ಕಾಲಾವಕಾಶ ಕೋರಿದ್ದರಿಂದ ಅ.8 ರಂದು ಮಧ್ಯಾಹ್ನ 12.30ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ವಿಸ್ತರಿಸಲಾಗಿದೆ.
ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ಎ2 ದರ್ಶನ್ಗೆ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದ್ದರಿಂದ ನಿರಾಸೆಯಾಗಿದೆ.
ಪ್ರಕರಣದ ಆರೋಪಿ ಎ1 ಪವಿತ್ರ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಅ.8 ರಂದೇ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…