ರಾಜ್ಯ

ಬೆಂಗಳೂರು| ಅಮೆರಿಕದ ಕಾನ್ಸುಲೇಟ್‌ ಕಾರ್ಯಾರಂಭ ಮಹತ್ವದ ಮೈಲಿಗಲ್ಲು: ಜೈಶಂಕರ್‌

ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್‌ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ.

ನಗರದ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್‌ ಹೋಟೆಲ್‌ನ ಕಚೇರಿಯನ್ನು ಇಂದು(ಜನವರಿ.17) ಅಮೆರಿಕ ರಾಯಭಾರಿ ಎರಿಕ್‌ ಗ್ಯಾರ್‌ಸೆಟಿ ಹಾಗೂ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಉದ್ಘಾಟಿಸಿದ್ದಾರೆ.

ಈ ಕಾನ್ಸುಲೇಟ್‌ಅನ್ನು ಉದ್ಘಾಟಿಸಿ ಮಾತನಾಡಿದ ಜೈಶಂಕರ್‌ ಅವರು, ಭಾರತದಲ್ಲಿರುವ ಅಮೆರಿಕದ 5ನೇ ಕಾನ್ಸುಲೇಟ್‌ ಕಚೇರಿ ಇದಾಗಿದ್ದು, ಬೆಂಗಳೂರು ಜನರ ಬಹುದಿನಗಳ ಬೇಡಿಕೆಯಾಗಿದೆ. ಅಲ್ಲದೇ ಜನತೆಯೇ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಇಲ್ಲಿನ ಜನರ ಜಾಗತಿಕ ಆಶೋತ್ತರಗಳಿಗೆ ಸ್ಪಂದಿಸಲು ಅಮೆರಿಕ ಕಾನ್ಸುಲೇಟ್‌ ಕಚೇರಿ ಕಾರ್ಯಾರಂಭ ಅಪೂರ್ವ ವೇದಿಕೆಯಾಗಿದೆ ಎಂದರು.

ಇನ್ನೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಇಂದು ಕಾನ್ಸುಲೇಟ್‌ ಕಚೇರಿ ಪ್ರಾರಂಭವಾಗಿರುವುದು ಬೆಂಗಳೂರು ಹಾಗೂ ರಾಜ್ಯದ ಜನರಿಗೆ ದೊಡ್ಡ ಸಂಗತಿಯಾಗಿದೆ. ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಸಿಎಂ ಆಗಿ ಮತ್ತು ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಬೆಂಗಳೂರಿಗೆ ಅಮೆರಿಕ ಕಾನ್ಸುಲೇಟ್‌ ಆರಂಭಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ಅದು ಇಂದು ಈಡೇರಿದಲ್ಲದೆ, ಈ ಕಚೇರಿಯ ಉದ್ಘಾಟನೆ ಅನೇಕ ಶಾಸಕರು ಮತ್ತು ಸಂಸದರ ಪ್ರಯತ್ನದ ಫಲವಾಗಿದೆ. ಜೊತೆಗೆ ಕಾನ್ಸುಲೇಟ್‌ ಕಚೇರಿಯೂ ಮುಂದಿನ ದಿನಗಳಲ್ಲಿ ಅಮೆರಿಕ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೆರಿಕ ಕಾನ್ಸುಲೇಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಸಮಾರಂಭವನ್ನು ಆಯೋಜಿಸಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕಾ ಸಹಕಾರವು, ಈ ಎರಡು ದೇಶಗಳ ಜನರ ದೃಢವಾದ ಸಂಬಂಧಗಳಿಂದ ಮುನ್ನಡಿಸಲ್ಪಟ್ಟಿದೆ. ಇದು ತಂತ್ರಜ್ಞಾನ, ನಾವೀನ್ಯತೆ, ಬಾಹ್ಯಾಕಾಶ, ರಕ್ಷಣೆ ಮತ್ತು ಶಿಕ್ಷಣದಂತಹ ಕ್ಷೇತ್ರಗಳಲ್ಲಿ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಅಮೆರಿಕ ಕಾನ್ಸುಲೇಟ್ ಈ ಸಹಯೋಗಗಳನ್ನು ಬಲಪಡಿಸುವಲ್ಲಿ, ವಿಚಾರ ವಿನಿಮಯವನ್ನು ಉತ್ತೇಜಿಸುವಲ್ಲಿ ಮತ್ತು ಪ್ರತಿಭೆಗಳ ಗತಿಶೀಲತೆಯನ್ನು ಸುಗಮಗೊಳಿಸುವಲ್ಲಿ ನೆರವಾಗಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

19 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

52 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

2 hours ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

5 hours ago