ರಾಜ್ಯ

ಬೆಂಗಳೂರು| ಅಮೆರಿಕದ ಕಾನ್ಸುಲೇಟ್‌ ಕಾರ್ಯಾರಂಭ ಮಹತ್ವದ ಮೈಲಿಗಲ್ಲು: ಜೈಶಂಕರ್‌

ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್‌ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ.

ನಗರದ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್‌ ಹೋಟೆಲ್‌ನ ಕಚೇರಿಯನ್ನು ಇಂದು(ಜನವರಿ.17) ಅಮೆರಿಕ ರಾಯಭಾರಿ ಎರಿಕ್‌ ಗ್ಯಾರ್‌ಸೆಟಿ ಹಾಗೂ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಉದ್ಘಾಟಿಸಿದ್ದಾರೆ.

ಈ ಕಾನ್ಸುಲೇಟ್‌ಅನ್ನು ಉದ್ಘಾಟಿಸಿ ಮಾತನಾಡಿದ ಜೈಶಂಕರ್‌ ಅವರು, ಭಾರತದಲ್ಲಿರುವ ಅಮೆರಿಕದ 5ನೇ ಕಾನ್ಸುಲೇಟ್‌ ಕಚೇರಿ ಇದಾಗಿದ್ದು, ಬೆಂಗಳೂರು ಜನರ ಬಹುದಿನಗಳ ಬೇಡಿಕೆಯಾಗಿದೆ. ಅಲ್ಲದೇ ಜನತೆಯೇ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಇಲ್ಲಿನ ಜನರ ಜಾಗತಿಕ ಆಶೋತ್ತರಗಳಿಗೆ ಸ್ಪಂದಿಸಲು ಅಮೆರಿಕ ಕಾನ್ಸುಲೇಟ್‌ ಕಚೇರಿ ಕಾರ್ಯಾರಂಭ ಅಪೂರ್ವ ವೇದಿಕೆಯಾಗಿದೆ ಎಂದರು.

ಇನ್ನೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಇಂದು ಕಾನ್ಸುಲೇಟ್‌ ಕಚೇರಿ ಪ್ರಾರಂಭವಾಗಿರುವುದು ಬೆಂಗಳೂರು ಹಾಗೂ ರಾಜ್ಯದ ಜನರಿಗೆ ದೊಡ್ಡ ಸಂಗತಿಯಾಗಿದೆ. ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಸಿಎಂ ಆಗಿ ಮತ್ತು ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಬೆಂಗಳೂರಿಗೆ ಅಮೆರಿಕ ಕಾನ್ಸುಲೇಟ್‌ ಆರಂಭಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ಅದು ಇಂದು ಈಡೇರಿದಲ್ಲದೆ, ಈ ಕಚೇರಿಯ ಉದ್ಘಾಟನೆ ಅನೇಕ ಶಾಸಕರು ಮತ್ತು ಸಂಸದರ ಪ್ರಯತ್ನದ ಫಲವಾಗಿದೆ. ಜೊತೆಗೆ ಕಾನ್ಸುಲೇಟ್‌ ಕಚೇರಿಯೂ ಮುಂದಿನ ದಿನಗಳಲ್ಲಿ ಅಮೆರಿಕ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೆರಿಕ ಕಾನ್ಸುಲೇಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಸಮಾರಂಭವನ್ನು ಆಯೋಜಿಸಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕಾ ಸಹಕಾರವು, ಈ ಎರಡು ದೇಶಗಳ ಜನರ ದೃಢವಾದ ಸಂಬಂಧಗಳಿಂದ ಮುನ್ನಡಿಸಲ್ಪಟ್ಟಿದೆ. ಇದು ತಂತ್ರಜ್ಞಾನ, ನಾವೀನ್ಯತೆ, ಬಾಹ್ಯಾಕಾಶ, ರಕ್ಷಣೆ ಮತ್ತು ಶಿಕ್ಷಣದಂತಹ ಕ್ಷೇತ್ರಗಳಲ್ಲಿ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಅಮೆರಿಕ ಕಾನ್ಸುಲೇಟ್ ಈ ಸಹಯೋಗಗಳನ್ನು ಬಲಪಡಿಸುವಲ್ಲಿ, ವಿಚಾರ ವಿನಿಮಯವನ್ನು ಉತ್ತೇಜಿಸುವಲ್ಲಿ ಮತ್ತು ಪ್ರತಿಭೆಗಳ ಗತಿಶೀಲತೆಯನ್ನು ಸುಗಮಗೊಳಿಸುವಲ್ಲಿ ನೆರವಾಗಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…

26 mins ago

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

2 hours ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

3 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

3 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

3 hours ago