ರಾಜ್ಯ

ಬೆಂಗಳೂರು| ಅಮೆರಿಕದ ಕಾನ್ಸುಲೇಟ್‌ ಕಾರ್ಯಾರಂಭ ಮಹತ್ವದ ಮೈಲಿಗಲ್ಲು: ಜೈಶಂಕರ್‌

ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್‌ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ.

ನಗರದ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್‌ ಹೋಟೆಲ್‌ನ ಕಚೇರಿಯನ್ನು ಇಂದು(ಜನವರಿ.17) ಅಮೆರಿಕ ರಾಯಭಾರಿ ಎರಿಕ್‌ ಗ್ಯಾರ್‌ಸೆಟಿ ಹಾಗೂ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಉದ್ಘಾಟಿಸಿದ್ದಾರೆ.

ಈ ಕಾನ್ಸುಲೇಟ್‌ಅನ್ನು ಉದ್ಘಾಟಿಸಿ ಮಾತನಾಡಿದ ಜೈಶಂಕರ್‌ ಅವರು, ಭಾರತದಲ್ಲಿರುವ ಅಮೆರಿಕದ 5ನೇ ಕಾನ್ಸುಲೇಟ್‌ ಕಚೇರಿ ಇದಾಗಿದ್ದು, ಬೆಂಗಳೂರು ಜನರ ಬಹುದಿನಗಳ ಬೇಡಿಕೆಯಾಗಿದೆ. ಅಲ್ಲದೇ ಜನತೆಯೇ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಇಲ್ಲಿನ ಜನರ ಜಾಗತಿಕ ಆಶೋತ್ತರಗಳಿಗೆ ಸ್ಪಂದಿಸಲು ಅಮೆರಿಕ ಕಾನ್ಸುಲೇಟ್‌ ಕಚೇರಿ ಕಾರ್ಯಾರಂಭ ಅಪೂರ್ವ ವೇದಿಕೆಯಾಗಿದೆ ಎಂದರು.

ಇನ್ನೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಇಂದು ಕಾನ್ಸುಲೇಟ್‌ ಕಚೇರಿ ಪ್ರಾರಂಭವಾಗಿರುವುದು ಬೆಂಗಳೂರು ಹಾಗೂ ರಾಜ್ಯದ ಜನರಿಗೆ ದೊಡ್ಡ ಸಂಗತಿಯಾಗಿದೆ. ಈ ಹಿಂದೆ ಎಸ್‌.ಎಂ.ಕೃಷ್ಣ ಅವರು ಸಿಎಂ ಆಗಿ ಮತ್ತು ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಬೆಂಗಳೂರಿಗೆ ಅಮೆರಿಕ ಕಾನ್ಸುಲೇಟ್‌ ಆರಂಭಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ಅದು ಇಂದು ಈಡೇರಿದಲ್ಲದೆ, ಈ ಕಚೇರಿಯ ಉದ್ಘಾಟನೆ ಅನೇಕ ಶಾಸಕರು ಮತ್ತು ಸಂಸದರ ಪ್ರಯತ್ನದ ಫಲವಾಗಿದೆ. ಜೊತೆಗೆ ಕಾನ್ಸುಲೇಟ್‌ ಕಚೇರಿಯೂ ಮುಂದಿನ ದಿನಗಳಲ್ಲಿ ಅಮೆರಿಕ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೆರಿಕ ಕಾನ್ಸುಲೇಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಸಮಾರಂಭವನ್ನು ಆಯೋಜಿಸಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕಾ ಸಹಕಾರವು, ಈ ಎರಡು ದೇಶಗಳ ಜನರ ದೃಢವಾದ ಸಂಬಂಧಗಳಿಂದ ಮುನ್ನಡಿಸಲ್ಪಟ್ಟಿದೆ. ಇದು ತಂತ್ರಜ್ಞಾನ, ನಾವೀನ್ಯತೆ, ಬಾಹ್ಯಾಕಾಶ, ರಕ್ಷಣೆ ಮತ್ತು ಶಿಕ್ಷಣದಂತಹ ಕ್ಷೇತ್ರಗಳಲ್ಲಿ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಅಮೆರಿಕ ಕಾನ್ಸುಲೇಟ್ ಈ ಸಹಯೋಗಗಳನ್ನು ಬಲಪಡಿಸುವಲ್ಲಿ, ವಿಚಾರ ವಿನಿಮಯವನ್ನು ಉತ್ತೇಜಿಸುವಲ್ಲಿ ಮತ್ತು ಪ್ರತಿಭೆಗಳ ಗತಿಶೀಲತೆಯನ್ನು ಸುಗಮಗೊಳಿಸುವಲ್ಲಿ ನೆರವಾಗಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago