ರಾಜ್ಯ

ದೇಶದಲ್ಲಿ ಎಲ್ಲಾ ಸಮುದಾಯಗಳು ಸೌಹಾರ್ದತೆಯಿಂದ ಬಾಳಲಿ, ಸಿಎಂ ಆರೋಗ್ಯ ಸುಧಾರಿಸಲು ವಿಶೇಷ ಪ್ರಾರ್ಥನೆ: ಜಮೀರ್‌

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು(ಮಾರ್ಚ್.‌31) ರಂಜಾನ್‌ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ರಂಜಾನ್‌ ಹಬ್ಬದ ಹಾರ್ದಿಕ ಶುಭಾಶಯಗಳು. ಮೂವತ್ತು ದಿನಗಳ ಕಾಲ ಉಪವಾಸದಿಂದ ಇದ್ದೇವೆ. ನಿನ್ನೆ ಹಿಂದೂಗಳಿಗೆ ಹೊಸ ವರ್ಷವಾಗಿರುವ ಯುಗಾದಿ ಹಬ್ಬವಾದರೆ, ಇಂದು ನಮಗೆ ರಂಜಾನ್‌ ದೊಡ್ಡ ಹಬ್ಬವಾಗಿದೆ. ಈ ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಎಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಇನ್ನು ಇಂದು ಸುಮಾರು ಬೆಳಿಗ್ಗೆ 9.35 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಫೋನ್‌ ಮಾಡಿ ರಂಜಾನ್‌ ಹಬ್ಬದ ವಿಶ್‌ ಮಾಡಿದ್ದಾರೆ. ಅಲ್ಲದೇ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಆರೋಗ್ಯ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಮುಸ್ಲಿಂ ಭಾಂದವರು ಕಪ್ಪು ಪಟ್ಟಿ ಧರಿಸಿ ಸಾಮಾಹಿಕ ಪ್ರಾರ್ಥನೆ ಸಲ್ಲಿಸಿರುವ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇವತ್ತು ಕಪ್ಪು ಪಟ್ಟಿ ಧರಿಸಿದ್ದೇವೆ. ವಕ್ಫ್ ಮಸೂದೆ ತರಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ. ಆದರೆ ಇದಕ್ಕೆ ನಮ್ಮ ರಾಜ್ಯ ಸರ್ಕಾರದಿಂದ ಬೆಂಬಲವಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ: ರಾಬರ್ಟ್‌ ವಾದ್ರಾಗೆ ಇಡಿ ಸಮನ್ಸ್‌

ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾಗೆ…

7 mins ago

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕೊಂಚ ಚೇತರಿಕೆ

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಸುಂಕ ವಾರ್‌ಗೆ ತಾತ್ಕಾಲಿಕ ಬ್ರೇಕ್‌ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕೊಂಚ…

28 mins ago

ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

35 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಪಾಲಿಗೆ ಬಿಗ್‌ ಡೇ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ ಡೇ ಆಗಿದ್ದು, ಸಿಎಂ ಮತ್ತೆ ಮುಡಾ ಕುಣಿಕೆಗೆ…

59 mins ago

ಬೆಳಗಾವಿ| ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್‌ ರೈಲು: ತಪ್ಪಿದ ಭಾರೀ ಅನಾಹುತ

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ…

2 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ…

2 hours ago